ಕುಂದಾಪುರ: ಕೆಪಿಸಿಸಿ ರಾಜ್ಯಾಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಂಗಳವಾರದಂದು ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದರು.
ಚುನಾವಣಾ ಪೂರ್ವದಲ್ಲಿ ಟೆಂಪಲ್ ರನ್ ಕೈಗೊಂಡಿರುವ ಡಿ.ಕೆ. ಶಿವಕುಮಾರ್ ಅವರು ಮೊದಲಿಗೆ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ ಹಾಗೂ ಶೃಂಗೇರಿಗೆ ಭೇಟಿ ನೀಡಿದ ಬಳಿಕ ಸಂಜೆ ವೇಳೆಗೆ ಬೈಂದೂರು ಬಳಿಯ ಅರೆಶಿರೂರು ಹೆಲಿಪ್ಯಾಡಿಗೆ ಬಂದುನಂತರ ಕೊಲ್ಲೂರಿಗೆ ಆಗಮಿಸಿ ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದರು.
ಕೊಲ್ಲೂರು ಮೂಕಾಂಬಿಕೆಯ ಪರಮಭಕ್ತರಾಗಿರುವ ಡಿ.ಕೆ ಶಿವಕುಮಾರ್ ದೇವಸ್ಥಾನದಲ್ಲಿ ಮೂಕಾಂಬಿಕೆ, ವೀರಭದ್ರ ದೇವರ ಸಹಿತ ವಿವಿಧ ಗುಡಿಗಳಿಗೆ ಭೇಟಿಯಿತ್ತರು.
ಬೈಂದೂರು ಮಾಜಿ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ, ಕೆ. ಗೋಪಾಲ ಪೂಜಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಪ್ರಚಾರ ಸಮಿತಿಯ ಸಂಯೋಜಕ ದಿನೇಶ್ ಪುತ್ರನ್, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ಸಂಯೋಜಕ ಮುರಳಿ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೀರ್ತಿ ಶೆಟ್ಟಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಮುಖಂಡರಾದ ಪ್ರಸಾದರಾಜ್ ಕಾಂಚನ್, ಯು.ಬಿ ಶೆಟ್ಟಿ, ಸುರೇಂದ್ರ ಶೆಟ್ಟಿ, ರಾಜು ಪೂಜಾರಿ, ಬಾಬು ಹೆಗ್ಡೆ ಮೊದಲಾದವರಿದ್ದರು.
Comments are closed.