ಕರಾವಳಿ

ಕೊಲ್ಲೂರು ಶ್ರೀ ಮೂಕಾಂಬಿಕಾ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬೈಂದೂರು ಬಿಜೆಪಿ ಯುವಮೋರ್ಚಾ

Pinterest LinkedIn Tumblr

ಬೈಂದೂರು: ಬಿಜೆಪಿ ಯುವಮೋರ್ಚಾ ಬೈಂದೂರು ವತಿಯಿಂದ ಬಿ. ವೈ ರಾಘವೇಂದ್ರರವರಿಗೆ ಬೈಂದೂರು ಕ್ಷೇತ್ರದಲ್ಲಿ 1 ಲಕ್ಷ ಲೀಡ್ ಕೊಡಿಸುವ ಶಾಸಕ ಗುರುರಾಜ್ ಗಂಟಿಹೊಳೆಯವರ ಸಂಕಲ್ಪಕ್ಕೆ ಶಕ್ತಿ ತುಂಬಲು ಕೊಲ್ಲೂರು ತಾಯಿ ಮೂಕಾಂಬಿಕೆಯಲ್ಲಿ ಯುವಮೋರ್ಚಾ ತಂಡದಿಂದ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.

ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಯುವಮೋರ್ಚ ಅಧ್ಯಕ್ಷ ಗಜೇಂದ್ರ ಬೇಲೆಮನೆ, ಪ್ರಧಾನಕಾರ್ಯದರ್ಶಿ ಪ್ರಸಾದ್ ಪಿ ಬೈಂದೂರ್ ಹಾಗೂ ಅನುರ ಮೆಂಡನ್ ಮತ್ತು ಯುವಮೋರ್ಚ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಸೋಮಯ್ಯ ಮತ್ತು ಯುವಮೋರ್ಚ ಪದಾಧಿಕಾರಿಗಳು ಈ ಭಾಗಿಯಾಗಿದ್ದರು.

Comments are closed.