ಮಡಿಕೇರಿ: 16 ವರ್ಷದ ಬಾಲಕಿಯನ್ನು ಕೊಂದು ರುಂಡದ ಸಮೇತ ಪರಾರಿಯಾಗಿದ್ದ ಆರೋಪಿ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಳ ಗ್ರಾಮದ ಪ್ರಕಾಶ್ (33) ಎಂಬಾತನನ್ನು ಶನಿವಾರ ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ರುಂಡ ಪತ್ತೆಯಾಗಿಲ್ಲ.
ಈತನಿಗಾಗಿ ಹಗಲು ರಾತ್ರಿ ನಿರಂತರವಾಗಿ ಶೋಧ ಕಾರ್ಯ ನಡೆಸುತಈ ವೇಳೆ ಬೆಳಿಗ್ಗೆ ಗ್ರಾಮದ ಸಮೀಪ ಕಾಡಿನಲ್ಲಿ ಈತ ಅವಿತುಕೊಂಡಿರುವ ಕುರಿತ ಮಾಹಿತಿ ಸಿಕ್ಕಿದ್ದು ಕೂಡಲೇ ಆತನನ್ನು ಬಂಧಿಸಲಾಯಿತು. ಇನ್ನು ಬಾಲಕಿಯ ರುಂಡದ ಕುರಿತು ಇನ್ನಷ್ಟೇ ತನಿಖೆ ನಡೆಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಬಂಧಿಸಲಾಗಿದೆ. ಈವರೆಗೆ ಬಾಲಕಿಯ ರುಂಡ ಪತ್ತೆಯಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸ್ಪಷ್ಟಪಡಿಸಿದ್ದಾರೆ.
Comments are closed.