ಕರಾವಳಿ

ಪರೀಕ್ಷೆಯಲ್ಲಿ ಜನಿವಾರ, ಮಾಂಗಲ್ಯ ತೆಗೆಸುವುದಿಲ್ಲ: ರೈಲ್ವೇ ಮಂಡಳಿಯಿಂದ ಅಧೀಕೃತ ಆದೇಶ- ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ

Pinterest LinkedIn Tumblr

ನವದೆಹಲಿ: ನಾಳೆಯಿಂದ ರೈಲ್ವೇ ಇಲಾಖೆಯ ಪರೀಕ್ಷೆ ನಡೆಯುತ್ತಿದ್ದು, ಅನೇಕ ವರ್ಷಗಳಿಂದ ಇದ್ದ ನಿಬಂಧನೆಗಳನ್ನು ವಾಪಸ್ ಪಡೆಯಲಾಗಿದೆ. ದೇಶಾದ್ಯಂತ ನಾಳೆಯಿಂದಲೇ ಈ ನಿಯಮ ಅನ್ವಯವಾಗಲಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ರೈಲ್ವೆ ಇಲಾಖೆಯ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ನಿಯಮವಿರುವುದರ ಕುರಿತು ಸಂಸದರು, ಶಾಸಕರು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಸಂಘಟನೆಗಳು ನನ್ನ ಗಮನಕ್ಕೆ ತಂದಿದ್ದರು. ಈ ಬಗ್ಗೆ ನನಗೆ ತಿಳಿದ ತಕ್ಷಣವೇ ಕೇಂದ್ರ ರೈಲ್ವೆ ಮಂತ್ರಿಗಳಾದ  ಅಶ್ವಿನಿ ವೈಷ್ಣವ್ ಅವರೊಂದಿಗೆ ಚರ್ಚಿಸಿ, ಈ ದೇಶದ ಜನರ ಸಂಸ್ಕೃತಿಗೆ ಧಕ್ಕೆ ಭಾರದ ರೀತಿಯಲ್ಲಿ ಇಲಾಖಾ ಪರೀಕ್ಷೆ ನಡೆಸಲು, ಶೀಘ್ರ ಕ್ರಮ ಕೈಗೊಳ್ಳಲಾಗಿದೆ.

ಈ ಕುರಿತು ಇಂದು ಅಧಿಕೃತ ಆದೇಶ ಹೊರಡಿಸಲಾಗಿದ್ದು, ಇದಕ್ಕೆ ಕಾರಣರಾದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ನಾಡಿನ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

 

Comments are closed.