ಕುಂದಾಪುರ: ಸುಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲೀಷ್ ಮೀಡಿಯಂ ಸ್ಕೂಲ್ ಯಡಾಡಿ-ಮತ್ಯಾಡಿ, ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ (ರಿ) ಕುಂದಾಪುರ ಇವರ ಸಹಯೋಗದೊಂದಿಗೆ, ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕರಿಗಾಗಿ ಮುದ್ದು ಕೃಷ್ಣ ಸ್ಪರ್ಧೆಯು ಆಗಸ್ಟ್ 17 ಭಾನುವಾರದಂದು ಹಮ್ಮಿಕೊಳ್ಳಲಾಗಿದೆ.

ಈ ಸ್ಪರ್ಧೆಯು ಬೆಳಿಗ್ಗೆ 9ಕ್ಕೆ ಸರಿಯಾಗಿ ವಿದ್ಯಾರಣ್ಯ ಕ್ಯಾಂಪಸ್, ಯಡಾಡಿ-ಮತ್ಯಾಡಿಯಲ್ಲಿ ಪ್ರಾರಂಭಗೊಳ್ಳಲಿದೆ.
ಸ್ಪರ್ಧೆಯನ್ನು ಎರಡು ವಿಭಾಗದಲ್ಲಿ ನಡೆಸಲಾಗುತ್ತದೆ.
1)1 ವರ್ಷದಿಂದ 3 ವರ್ಷದ ವರೆಗಿನ ಮಕ್ಕಳಿಗೆ( ಜೂನಿಯರ್ಸ್)
2) 3 ವರ್ಷದಿಂದ 6 ವರ್ಷದ ವರೆಗಿನ ಮಕ್ಕಳಿಗೆ (ಸೀನಿಯರ್ಸ್)
ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಾಳುಗಳಿಗೆ ಪ್ರತ್ಯೇಕ ಬಹುಮಾನ ನೀಡಲಾಗುವುದು.
ಪ್ರಥಮ ಬಹುಮಾನ: ರೂ.10,000,
ದ್ವಿತೀಯ ಬಹುಮಾನ: ರೂ.7,500 ಹಾಗೂ
ತೃತೀಯ ಬಹುಮಾನ: ರೂ.5,000 ರಂತೆ ಫಲಕ ಮತ್ತು ಪ್ರಮಾಣ ಪತ್ರದೊಂದಿಗೆ ಹಾಗೂ ಭಾಗವಹಿಸುವ ಪ್ರತಿ ಸ್ಪರ್ಧಿಗಳಿಗೂ ಸ್ಮರಣಿಕೆ ಹಾಗೂ ಪ್ರಶಂಸನಾ ಪತ್ರ ನೀಡಲಾಗುವುದು.
ಸ್ಪರ್ಧೆಯ ವಿಶೇಷ ಸೂಚನೆಗಳು:
*ಮಗುವಿನ ಜನನ ಪ್ರಮಾಣ ಪತ್ರದ ಪ್ರತಿಯನ್ನು ಸ್ಪರ್ಧೆಯ ದಿನ ನೋಂದಣಿ ವಿಭಾಗದಲ್ಲಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
*ಸ್ಪರ್ಧೆಯಲ್ಲಿ ತೀರ್ಪುಗಾರರ ನಿರ್ಣಯವೇ ಅಂತಿಮವಾಗಿರುತ್ತದೆ.
ಆಸಕ್ತರು ದಿನಾಂಕ 15/08/2025 ಶುಕ್ರವಾರದ ಒಳಗೆ ತಮ್ಮ ಮಗುವಿನ ಆಧಾರ ಕಾರ್ಡ್ ಮತ್ತು ಜನನ ಪ್ರಮಾಣ ಪತ್ರವನ್ನು 88678 53401, 9964291755 ವಾಟ್ಸಾಪ್ ಸಂಖ್ಯೆಗೆ ಕಳುಹಿಸಿದ ನಂತರ ನೋಂದಣಿ ಲಿಂಕ್ನ್ನು ಕಳುಹಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Comments are closed.