ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಾಣೆಯಾದ ಮೊಬೈಲ್ ಫೋನ್ಗಳ ಪತ್ತೆ ಬಗ್ಗೆ ಕೆ.ಎಸ್.ಪಿ. ಅಪ್ಲಿಕೇಶನ್ ಮೂಲಕ ದೂರುಗಳನ್ನು ಸ್ವೀಕರಿಸಿದ್ದು, ಈ ಮೊಬೈಲ್ಗಳನ್ನು ಭಾರತ ಸರ್ಕಾರ ಜಾರಿಗೆ ತಂದಿರುವ ಸಿಇಐಆರ್ (CEIR) ಪೋರ್ಟಲ್ ಅಡಿ ಮೊಬೈಲ್ಗಳನ್ನು ಬ್ಲಾಕ್ ಮಾಡಲಾಗಿದ್ದು ಡಿ.16 ರಂದು ಸಿಇಐಆರ್ ಪೋರ್ಟಲ್ನಲ್ಲಿ ಪತ್ತೆಹಚ್ಚಿದ ಸುಮಾರು 60 ಮೊಬೈಲ್ಗಳನ್ನು ಕಳೆದುಕೊಂಡವರಿಗೆ ಹಸ್ತಾಂತರಿಸಲಾಯಿತು.

ಮೊಬೈಲ್ನ ವಾರೀಸುದಾರರನ್ನು ಠಾಣೆಗೆ ಕರೆಸಿ ಉಡುಪಿ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ. ಹಾಗೂ ಉಡುಪಿ ನಗರ ಪೊಲೀಸ್ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಹಾಗೂ ಪೊಲೀಸ್ ಉಪ ನಿರೀಕ್ಷಕರುಗಳಾದ ಭರತೇಶ ಕಂಕಣವಾಡಿ, ಈರಣ್ಣ ಶಿರಗುಂಪಿ, ನಾರಾಯಣ ಬಿ ಮತ್ತು ಗೋಪಾಲಕೃಷ್ಣ ಜೋಗಿ ರವರು ದೂರುದಾರರಿಗೆ ಹಸ್ತಾಂತರ ಮಾಡಿದ್ದಾರೆ.
ಈ ಮೊಬೈಲ್ ಪತ್ತೆ ಕಾರ್ಯಾಚರಣೆಯಲ್ಲಿ ಉಡುಪಿ ನಗರ ಪೊಲೀಸ್ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಹಾಗೂ ಪೊಲೀಸ್ ಉಪನಿರೀಕ್ಷಕರಾದ ಭರತೇಶ ಕಂಕಣವಾಡಿ, ಈರಣ್ಣ ಶಿರಗುಂಪಿ, ನಾರಾಯಣ ಬಿ ಮತ್ತು ಗೋಪಾಲಕೃಷ್ಣ ಜೋಗಿ ಮತ್ತು ಠಾಣಾ ಗಣಕಯಂತ್ರ ಸಿಬ್ಬಂದಿಯವರಾದ ಸಿಪಿಸಿ ವಿನಯಕುಮಾರ್ ಮತ್ತು ಸಿಪಿಸಿ ಜಾಸ್ವಾ ಪಾಲ್ಗೊಂಡಿದ್ದರು.
Comments are closed.