ಕುಂದಾಪುರ: ದೇವರಿಗೆ ತಲುಪುವ ಹಲವು ಯೋಜನೆಗಳು ದೇವರ ಸೇವೆ ಮಾಡುವ ದೇವಾಡಿಗ ಸಮಾಜಕ್ಕೆ ಸಿಗದಿದ್ದು ಮುಂದಿನ ದಿನಗಳಲ್ಲಿ ದೇವಾಡಿಗರ ಸಮಾಜ ಅಭಿವೃದ್ಧಿಗೆ ವಿಶೇಷ ಮಹತ್ವ ನೀಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಭರವಸೆ ನೀಡಿದರು.

ಅವರು ಡಿ.28ರಂದು ಉಪ್ಪುಂದ ಮಾತ್ರಶ್ರೀ ಸಭಾಭವನದಲ್ಲಿ ನಡೆದ ಉಪ್ಪುಂದ ದೇವಾಡಿಗರ ಸಂಘದ ದಶಮ ಸಂಭ್ರಮ, ಸಾಮೂಹಿಕ ಸತ್ಯನಾರಾಯಣ ಪೂಜೆ, ಸಾಧಕರಿಗೆ ಸಮ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ದೇವಾಡಿಗ ಸಮಾಜ ಬಾಂಧವರ ಭಾಂದವ್ಯ ಮರೆಯಲಾಗದು, ಸಮಾಜ ಅಭಿವೃದ್ಧಿಗೆ ಜೊತೆಯಾಗಿ ಇರುವುದಾಗಿ ತಿಳಿಸಿದರು.
ವಿಶ್ವ ದೇವಾಡಿಗ ಮಹಾಮಂಡಲ ಅಧ್ಯಕ್ಷ ಧರ್ಮಪಾಲ ದೇವಾಡಿಗ ಮುಂದಿನ ದಿನಗಳಲ್ಲಿ ದೇವಾಡಿಗರ ಅಭಿವೃದ್ಧಿಗೆ ನಿಗಮ ಮಂಡಳಿ ರಚನೆ ಆಗಬೇಕು ಇದಕ್ಕಾಗಿ ಪ್ರಯತ್ನಗಳು ನಡೆಯುತ್ತಿವೆ ಎಂದರು.
ಬಾರ್ಕೂರು ಶ್ರೀ ಏಕನಾಥೇಶ್ವರಿ ದೇವಸ್ಥಾನದ ವಿಶ್ವಸ್ಥ ಅಣ್ಣಯ್ಯ ಶೇರಿಗಾರ್ ಉದ್ಘಾಟಿಸಿದರು. ಸಂಸದ ಬಿ.ವೈ. ರಾಘವೇಂದ್ರ ಕಟ್ಟಡದ ನಿಧಿ ಬಿಡುಗಡೆಗೊಳಿಸಿದರು. ಸಂಸದ ಬಿ.ವೈ.ರಾಘವೇಂದ್ರ ಮತ್ತು ಶಾಸಕ ಗುರುರಾಜ್ ಗಂಟಿಹೊಳೆ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.
ಬೈಂದೂರು ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ಬಿ.ಎಂ.ಸುಕುಮಾರ್ ಶೆಟ್ಟಿ, ಬಾರ್ಕೂರು ಶ್ರೀ ಏಕನಾಥೇಶ್ವರಿ ದೇವಸ್ಥಾನದ ವಿಶ್ವಸ್ಥ ಎಚ್. ಮೋಹನದಾಸ್, ಮಂಗಳೂರು ಎಸ್.ಡಿ.ಎಂ. ಕಾಲೇಜು ನಿರ್ದೇಶಕ ಕಂಕನಾಡಿ ಡಾ.ದೇವರಾಜ್ ದೇವಾಡಿಗ, ಬೆಂಗಳೂರು ದೇವಾಡಿಗ ಸಂಘದ ಅಧ್ಯಕ್ಷ ರಮೇಶ ದೇವಾಡಿಗ ವಂಡ್ಸೆ, ಮಂಗಳೂರು ಕೆ.ಆರ್.ಡಿ.ಎಸ್., ಉಪಾಧ್ಯಕ್ಷ ಎಂ.ಎಚ್. ಕರುಣಾಕರ ದೇವಾಡಿಗ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಆಲೂರು ರಘುರಾಮ ದೇವಾಡಿಗ, ಏಕನಾಥೇಶ್ವರಿ ದೇವಸ್ಥಾನದ ಕಾರ್ಯದರ್ಶಿ ಗಣೇಶ್ ದೇವಾಡಿಗ, ಮುಧೋಳ ಬಾಬು ದೇವಾಡಿಗ, ಉದ್ಯಮಿಗಳಾದ ನಾಗರಾಜ್ ಡಿ. ಪಡುಕೋಣೆ, ಹರೀಶ್ ದೇವಾಡಿಗ ಹಾಡಿಮನೆ, ಸಂಘದ ಗೌರವಾಧ್ಯಕ್ಷ ಬಿ.ಎ. ಮಂಜು ದೇವಾಡಿಗ, ಯು.ಎ. ಮಂಜು ದೇವಾಡಿಗ, ಇಂಜಿನಿಯರ್ ಮಂಜುನಾಥ ದೇವಾಡಿಗ, ಪ್ರಮೀಳಾ ದೇವಾಡಿಗ, ಕೃಷ್ಣ ದೇವಾಡಿಗ ಬೈಂದೂರು, ಸುಶೀಲಾ ದೇವಾಡಿಗ, ಗೌರಿ ದೇವಾಡಿಗ, ಪ್ರಿಯದರ್ಶಿನಿ ದೇವಾಡಿಗ, ಜಗದೀಶ ದೇವಾಡಿಗ ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ರವೀಂದ್ರ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕ್ಷೇತ್ರಗಳ ಸಾಧಕರನ್ನು ಸಮ್ಮನಿಸಲಾಯಿತು. ವಿಧ್ಯಾರ್ಥಿ ವೇತನ ವಿತರಿಸಲಾಯಿತು. ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಸಂಘದ ಗೌರವಾಧ್ಯಕ್ಷ ಜನಾರ್ದನ ದೇವಾಡಿಗ ಪ್ರಾಸ್ತಾವಿಸಿದರು. ಶಿಕ್ಷಕ ರಾಮಕೃಷ್ಣ ದೇವಾಡಿಗ ಸ್ವಾಗತಿಸಿದರು. ಶಿಕ್ಷಕ ಮಂಜುನಾಥ ದೇವಾಡಿಗ ಮತ್ತು ಶ್ರೀಲತಾ ನಿರೂಪಿಸಿದರು. ಶಿಕ್ಷಕ ಸುಧಾಕರ ದೇವಾಡಿಗ ವಂದಿಸಿದರು.
Comments are closed.