ಉಡುಪಿ: ಮಂಗಳೂರಿನ ಸುರತ್ಕಲ್ ಕಾಂಗ್ರೆಸ್ ಕಾರ್ಪೋರೇಟರ್ ತುಳುವಿನಲ್ಲಿ ಮಾಡಿರುವ ಭಾಷಣ ಈಗ ವೈರಲ್ ಆಗಿದೆ. ಪ್ರತಿಭಾ ಕುಳಾಯಿ ಉಡುಪಿಯ ಕಾರ್ಕಳದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬಿಜೆಪಿ ವಿರುದ್ಧ ಆಕ್ರೋಷ ವ್ಯಕ್ತಪಡಿಸಿದ್ದರು.
ಯಾರಿಗೆಲ್ಲ ಸಾಯಲು ಮನಸ್ಸಿದೆ ಅವರು ಸಂಘ ಪರಿವಾರ ಸೇರಿ. ದುಡಿಯಲು ಮನಸ್ಸಿಲ್ಲದವರೂ ಸಂಘ ಪರಿವಾರ ಸೇರಿ. ಮರ್ಡರ್ ಮಾಡಿ ಬಂದ್ರೆ ಸಾಕು ಜೈಲಿನಲ್ಲಿ ನಿಮಗೆ ಎಷ್ಟು ಬೇಕಾದ್ರೂ ಅನ್ನ ಸಿಗುತ್ತದೆ ಎಂದಿದ್ದಾರೆ. ಧರ್ಮಾರ್ಥ ನಿಮಗೆ ಜೈಲಿನಲ್ಲಿ ಅನ್ನ ಸಿಗುತ್ತದೆ, ಕೊಲೆ ಮಾಡಿಸಿದ ಸಂಘ ಪರಿವಾರದವರು ಜೈಲಿಗೆ ಇಣುಕಿ ನೋಡಲು ಹೋಗುದಿಲ್ಲ.
ಯಾರಾದ್ರೂ ಹಿಂದುಗಳು ಸತ್ತರೆ ಸಾಕು, ವಾಟ್ಸಾಪ್ ಫೇಸ್ ಬುಕ್ ನಲ್ಲಿ ಸತ್ತವರ ಬಗ್ಗೆ ಪ್ರಚಾರ ಮಾಡ್ತಾರೆ. ಇಷ್ಟು ಕೋಟಿ ಸಂಗ್ರಹ ಆಗಿದೆ , ಅಷ್ಟು ಕೋಟಿ ಸಂಗ್ರಹ ಆಯ್ತು ಅಂತ ಪ್ರಚಾರ ಮಾಡುತ್ತಾರೆ. ಆದ್ರೆ ಸಂತ್ರಸ್ತ ಮನೆಯವರಿಗೆ ಒಂದು ರೂಪಾಯಿ ಈವರೆಗೆ ಸಿಕ್ಕಿಲ್ಲ. ಎಲ್ಲರೂ ಬಂದು ಹೋದ್ರು. ಯಾರೂ ಏನೂ ಮಾಡಿಲ್ಲ ಅಂತ ಶರತ್ ಮಡಿವಾಳ ತಂದೆ ಹೇಳಿಕೆ ಕೊಟ್ಟಿದ್ದರು. ದೀಪಕ್ ರಾವ್ ಕೊಲೆಯಾದಾಗ್ಲೂ ಕೋಟಿಗಟ್ಟಲೆ ಸಂಗ್ರಹ ಮಾಡಿದ್ದಾರೆ. ದೀಪಕ್ ರಾವ್ ಮನೆಯವರಿಗೆ ಇವತ್ತಿನವರೆಗೆ ಒಂದು ರುಪಾಯಿ ಸಿಕ್ಕಿಲ್ಲ ಎಂದು ಕುಳಾಯಿ ಆರೋಪಿಸಿದರು.
ಹಿಂದೂ ಯುವಕರು ಸತ್ತರೆ ಹಿಂದೂಪರ ಸಂಘಟನೆಗಳು ಸಂಭ್ರಮಿಸುತ್ತವೆ. ಹಲವಾರು ಹಿಂದೂಗಳನ್ನು ಇವರೇ ಕೊಂದಿದ್ದಾರೆ. ನಾನು ಕೂಡಾ ಒಬ್ಬಳು ಹಿಂದೂ, ನನ್ನ ಬಣ್ಣ ಕೂಡಾ ಕೇಸರಿಯೇ. ಬಿಜೆಪಿಯವರು ಕೇಸರಿಯನ್ನಯ ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಹೇಳಿ ಪ್ರತಿಭಾ ವಂದೇ ಮಾತರಂ .. ವಂದೇ ಮಾತರಂ ಅಂತ ಜೈಘೋಷ ಹಾಕಿದ್ದಾರೆ. ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಜೈಘೋಷ ಹಾಕಿಸಿದ್ದಾರೆ.
ಪ್ರತಿಭಾ ಮಂಗಳೂರಿನ ಸುರತ್ಕಲ್ ವ್ಯಾಪ್ತಿಯ ಕಾರ್ಪೋರೇಟರ್ ಆಗಿದ್ದು, ದೀಪಕ್ ರಾವ್ ಮೃತಪಟ್ಟಾಗ ಬಹಳ ಆಕ್ರೋಷಕ್ಕೆ ಒಳಗಾಗಿದ್ದರು. ಪ್ರತಿಭಾ ಕುಳಾಯಿ ವಿವಾದಾತ್ಮಕ ಭಾಷಣ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Comments are closed.