ಉಡುಪಿ: ಉಡುಪಿಯಲ್ಲಿ ಬಂದ್ ವೇಳೆ ಕೈ ಮತ್ತು ಕಮಲ ಮಾರಾಮಾರಿ: ನಗರದಲ್ಲಿ 144 ಸೆಕ್ಷನ್ ಜಾರಿ ಇಂಧನ ಬೆಲೆಯೇರಿಕೆ ವಿಚಾರದಲ್ಲಿ ಸೋಮವಾರ ನಡೆದ ಭಾರತ್ ಬಂದ್ ವೇಳೆ ಉಡುಪಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.
ಈ ಗಲಭೆಯ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ನಗರಾದ್ಯಂತ 144 ಸೆಕ್ಷನ್ ಜಾರಿಗೊಳಿಸಿ ಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಅವರು ಆದೇಶಿಸಿದ್ದಾರೆ.
ಬನ್ನಂಜೆ ಸಮೀಪ ಬಿಜೆಪಿ ಮುಖಂಡ ಪ್ರಭಾಕರ್ ಪೂಜಾರಿ ಅವರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಭಾರೀ ಪ್ರತಿಭಟನೆ ನಡೆಯಿತು. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು ಎನ್ನಲಾಗಿದೆ. ಖುದ್ದು ಎಸ್ಪಿ ಲಕ್ಷ್ಮಣ ನಿಂಬರ್ಗಿ ಉಪಸ್ಥಿತಿಯಲ್ಲೇ ಈ ಲಾಠಿ ಚಾರ್ಜ್ ನಡೆದಿದೆ ಎನ್ನಲಾಗಿದೆ. ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಗೆ ಲಾಠಿ ಏಟು ಬಿದ್ದಿದ್ದು, ಸದ್ಯ ಆ ವೈರಲ್ ಇಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಉಭಯ ಪಕ್ಷಗಳ ನಾಯಕರು ಆಸ್ಪತ್ರೆಗೆ ತೆರಳಿ ತಮ್ಮ ತಮ್ಮ ಕಾರ್ಯಕರ್ತರುಗಳ ಯೋಗಕ್ಷೇಮ ವಿಚಾರಿಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಇಂದು ಸಂಜೆಯಿಂದ ನಾಳೆ ಬೆಳಗ್ಗೆ 6ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
Comments are closed.