ಕರಾವಳಿ

ಪ್ರತಿಷ್ಠಿತ ಕರಾವಳಿ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮ : ಈ ಬಾರಿ ಪಟಾಕಿ ರಹಿತ ಆಚರಣೆ

Pinterest LinkedIn Tumblr

ಮಂಗಳೂರು, ನವೆಂಬರ್.16 : ಮಂಗಳೂರಿನ ಪ್ರತಿಷ್ಠಿತ ಕರಾವಳಿ ಕಾಲೇಜು ಸಮೂಹದ ವತಿಯಿಂದ ನಗರದ ಕೊಟ್ಟಾರದ ಕಾಲೇಜು ಆವರಣದಲ್ಲಿ ಬಾನುವಾರ ದೀಪಾವಳಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಜಿ.ಆರ್ ಎಜ್ಯುಕೇಶನ್ ಹಾಗೂ ಕರಾವಳಿ ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಎಸ್.ಗಣೇಶ್ ರಾವ್ ಅವರ ನೇತ್ರತ್ವದಲ್ಲಿ ಈ ದೀಪಾವಳಿ ಹಬ್ಬವನ್ನು ಅಚರಣೆ ಮಾಡಲಾಯಿತು. ಕಾಲೇಜು ಆಡಳಿತಾ ಮಂಡಳಿಯ ನಿರ್ದೇಶಕರು, ಪ್ರಾಂಶುಪಾಲ ಮೋಹನ್, ಕಾಲೇಜಿನ ವಿವಿಧ ವಿಭಾಗಳ ಮುಖ್ಯಸ್ಥರು ಹಾಗೂ ವಿಧ್ಯಾರ್ಥಿಗಳು ಭಾಗವಹಿಸಿದ್ದರು.

ಕೋವೀಡ್ ಸೋಂಕು ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಹಾಗೂ ಸರ್ಕಾರ ಹಸುರು ಪಟಾಕಿ ಹೊರತುಪಡಿಸಿ ಇತರ ಪಟಾಕಿಗಳನ್ನು ನಿಷೇಧಿಸಿರುವುದರಿಂದ ಈ ಬಾರಿ ಪಟಾಕಿ ರಹಿತವಾಗಿ ದೀಪಾವಳಿ ಹಬ್ಬವನ್ನು ಸರಳವಾಗಿ ಅಚರಣೆ ಮಾಡಲಾಯಿತು.

ಈ ವೇಳೆ ಸುದ್ಧಿಗಾರರ ಜೊತೆ ಮಾತನಾಡಿದ ಕರಾವಳಿ ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಎಸ್.ಗಣೇಶ್ ರಾವ್ ಅವರು, ದೂರದೂರಿನ ವಿದ್ಯಾರ್ಥಿಗಳಿಗೆ ದೀಪಾವಳಿ ಆಚರಿಸಲು ತಮ್ಮ ಊರಿಗೆ ತೆರಳಲು ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಕಾಲೇಜಿನ ಸರ್ವಧರ್ಮ ಸಮಭಾವ ಸಮನ್ವಯದ ಚಿಂತನೆಯೊಂದಿಗೆ ಪ್ರತೀ ವರ್ಷ ಕಾಲೇಜಿನಲ್ಲಿ ದೀಪಾವಳಿ ಹಬ್ಬವನ್ನು ಅಚರಣೆ ಮಾಡುತ್ತಿದ್ದೆವು. ಆದರೆ ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಕಾಲೇಜುಗಳು ಆರಂಭವಾಗದೇ ಇರುವ ಹಿನ್ನೆಲೆಯಲ್ಲಿ ಕೆಲವೇ ಮಂದಿ ವಿಧ್ಯಾರ್ಥಿಗಳ ಉಪಸ್ಥಿತಿಯಲ್ಲಿ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ದೀಪಾವಳಿ ಹಬ್ಬವನ್ನು ಆಚರಣೆ ಮಾಡಿದ್ದೇವೆ.

ಜೊತೆಗೆ ಸರ್ಕಾರ ಹಸುರು ಪಟಾಕಿ ಹೊರತುಪಡಿಸಿ ಇತರ ಪಟಾಕಿಗಳನ್ನು ನಿಷೇಧಿಸಿರುವುದರಿಂದ ಈ ಬಾರಿ ಪಟಾಕಿ ರಹಿತವಾಗಿ ಕಾಲೇಜಿನ ಆವರಣದಲ್ಲಿ ಲಕ್ಷಾಂತರ ದೀಪಗಳನ್ನು ಹಚ್ಚುವ ಮೂಲಕ ಹಾಗೂ ರಂಗೋಲಿ ಬಿಡಿಸುವ ಮೂಲಕ ದೀಪಾವಳಿ ಹಬ್ಬವನ್ನು ಸರಳವಾಗಿ ಅಚರಣೆ ಮಾಡಲಾಯಿತು ಎಂದು ಹೇಳಿದರು.

ದೀಪಾವಳಿ ಎಂದರೆ ದೀಪದ ಹಬ್ಬವಾಗಿದ್ದು, ದೀಪ ಎಂದರೆ ಸಂತೋಷದ ಸಂಕೇತವಾಗಿದೆ. ದೀಪಾವಳಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ಹಬ್ಬವಲ್ಲ, ಇಡೀ ದೇಶವೇ ದೀಪಾವಳಿಯನ್ನು ಆಚರಿಸುತ್ತಿದೆ. ದೀಪಾವಳಿ ಹಬ್ಬವನ್ನು ಕೇವಲ ಮೂರು ದಿನ ಆಚರಿಸದೆ, ಪ್ರತಿ ದಿನವೂ ಆಚರಿಸಬೇಕು.

ವಿದ್ಯಾರ್ಥಿಗಳಲ್ಲಿ ಯಾವೂದೇ ಜಾತಿ ಧರ್ಮದ ಬಗ್ಗೆ ದ್ವೇಷ ಬಾವನೆ ಬರಬಾರದೆಂಬ ಸದುದ್ದೇಶದಿಂದ ಇಂತಹ ಹಬ್ಬವನ್ನು ಒಟ್ಟಿಗೆ ಆಚರಿಸಲು ಅವಕಾಶ ನೀಡಲಾಗುತ್ತದೆ. ನಮ್ಮ ಕಾಲೇಜಿನಲ್ಲಿ ಎಲ್ಲಾ ಜಾತಿ ಧರ್ಮದ ವಿದ್ಯಾರ್ಥಿಗಳು ದೀಪಾವಳಿ ಹಬ್ಬವನ್ನು ಒಟ್ಟಿಗೆ ಆಚರಿಸುತ್ತಿರುವುದು ಹೆಮ್ಮೆಯೆ ವಿಷಯ. ಇಲ್ಲಿ ದೀಪಾವಳಿ ಮಾತ್ರವಲ್ಲದೇ ಓಣಂ ಸಹಿತಾ ವಿವಿಧ ಧರ್ಮಗಳ ಹಬ್ಬವನ್ನು ಎಲ್ಲಾ ವಿದ್ಯಾರ್ಥಿಗಳು ಒಟ್ಟಿಗೆ ಆಚರಿಸುತ್ತಾ ಬಂದಿರುತ್ತಾರೆ ಎಂದು ಎಸ್.ಗಣೇಶ್ ರಾವ್ ಹೇಳಿದರು.

ಪ್ರತೀ ವರ್ಷ ದೀಪಾವಳಿ ಆಚರಣೆ ಜೊತೆಗೆ ಕಾಲೇಜಿನ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ, ಭಾರತದ ಸಾಂಸ್ಕೃತಿಕ ವೈಭವವನ್ನು ಸಾರುವ ಭರತನಾಟ್ಯ, ಜಾನಪದ ನೃತ್ಯ, ಭಾರತೀಯ ಶೈಲಿಯ ಫ್ಯಾಶನ್ ಶೋ, ಕೋಲಾಟ, ರಾಜಸ್ಥಾನಿ ನೃತ್ಯ, ಗುಜಾರಾತಿ ನೃತ್ಯ, ಕಾಶ್ಮೀರ ಶೈಲಿಯ ನೃತ್ಯ, ಬೆಂಗಳಿ ನೃತ್ಯಗಳನ್ನು ಕಾಲೇಜಿನ ವಿದ್ಯಾರ್ಥಿಗಳು ಪ್ರದರ್ಶಿಸುತ್ತಿದ್ದರು. ಜೊತೆಗೆ ಸಾಂಪ್ರಾದಾಯಿಕ ಪಟಾಕಿ ಹಚ್ಚಿ ಸಂಭ್ರಮ ಪಡುವ ಮೂಲಕ ದೀಪಾವಳಿ ಹಬ್ಬವನ್ನು ಆಚರಿಸುತ್ತಿದ್ದರು.

ಆದರೆ ಈ ಬಾರಿ ಕೊರೋನ ಮಹಾಮಾರಿಯ ಹಿನ್ನೆಲೆಯಲ್ಲಿ ಈ ಎಲ್ಲಾ ವೈವಿಧ್ಯಮಯ ಕಾರ್ಯಕ್ರಮ ಗಳನ್ನು ಕಾಲೇಜಿನ ಆಡಳಿತ ಮಂಡಳಿ ರದ್ದು ಪಡಿಸಿದೆ.

Comments are closed.