ಕರಾವಳಿ

ಕಾರ್ಕಳದಲ್ಲಿ ‘ಕಾರ್ಲ ಕಜೆ ಬ್ರಾಂಡ್ ಅಕ್ಕಿ’ ಲೋಕಾರ್ಪಣೆಗೊಳಿಸಿದ ಸಚಿವ ಬಿ.ಸಿ.ಪಾಟೀಲ್

Pinterest LinkedIn Tumblr

ಉಡುಪಿ: ಪ್ರತಿಗ್ರಾಮ ಪಂಚಾಯತ್‌ಗಳಲ್ಲಿ ಮಣ್ಣು ಪರೀಕ್ಷೆ ಘಟಕ ಆರಂಭಿಸುವ ಯೋಜನೆ ರಾಜ್ಯ ಸರಕಾರದ ಮುಂದಿದ್ದು ಯೋಜನೆಯ ಪ್ರಸ್ತಾವನೆ ಕೇಂದ್ರ ಸರಕಾರಕ್ಕೆ ಕಳುಹಿಸಲಾಗಿದೆ. ಕೃಷಿ ಸಂಜೀವಿನಿ ಮೂಲಕ ರೈತರ ಹೊಲಕ್ಕೆ ಭೇಟಿನೀಡಿ ಸಮಸ್ಸೆ ನಿವರಣೆಗೆ ಮಾರ್ಗದರ್ಶನ ನೀಡಲಾಗುವುದು. ಈಗಾಗಲೇ 40 ವಾಹನಗಳನ್ನು ಅದಕ್ಕಾಗಿ ವಿನಿಯೋಗಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.

ಕುಕ್ಕುಂದೂರು ಗ್ರಾಮ ಪಂಚಾಯತ್ ಮೈದಾನದಲ್ಲಿ ಸೋಮವಾರದಂದು ಕಾರ್ಲ ಕಜೆ ಮುದ್ರಾಂಕ ಬಿಡುಗಡೆ ಹಾಗೂ ರೈತರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಲ ಕಜೆಯ ಮೂಲಕ ರೈತರಿಗೆ ಬೆನ್ನೆಲುಬಾಗಿ ನಿಂತು ರೈತರ ಬ್ರಾಂಡ್ ಬಿಡುಗಡೆಗೆ ಶಾಸಕ ವಿ.ಸುನೀಲ್ ಕುಮಾರ್ ಕಾರಣರಾಗಿದ್ದಾರೆ. ಕೃಷಿ ಸಚಿವನಾಗಿ ಉತ್ಪಾದನ ಬ್ರಾಂಡ್‌ವೊಂದನ್ನು ಲೋರ್ಕಣೆಗೈಯುತ್ತಿರುವುದು ಸಚಿವ ಸ್ಥಾನದಲ್ಲಿ ನನಗೆ ಖುಷಿ ತಂದಿದೆ. ಕಾರ್ಲ ಕಜೆಯ ಕುರಿತು ಡಿಎನ್‌ಎ ಪರೀಕ್ಷೆ,ಸಂಶೋಧನೆ ನಡೆಸಿ ಪ್ರಮಾಣ ಪತ್ರ ಅತೀ ಶೀಘ್ರದಲ್ಲಿ ದೊರಕಿಸಿ ಕೊಡುವಲ್ಲಿ ಇಲಾಖಾಧಿಕಾರಿಗಳು ಮುಂದಾಗಬೇಕೆಂದರು. ಜೊತೆಗೆ ಬೆಂಬಲ ಬೆಲೆ ನಿಗದಿ ಪಡಿಸಬೇಕು. ದೇಶ ಕರೋನಾ ಸಂಕಷ್ಟ ಎದುರಿಸುತ್ತಿದ್ದ ದಿನಗಳಲ್ಲಿ ನಾಗರಿಕರು ಮನೆಯೊಳಗೆ ಕುಳಿತು ದಿನಗಳನ್ನು ಕಳೆಯಲು ಕಾರಣವಾಗಿರುವುದೇ ರೈತರು ಬೆಳೆಸಿದ ಬೆಳೆಯಾಗಿದೆ” ಎಂದರು.

ಶಾಸಕ ಹಾಗೂ ಸರಕಾರದ ಮುಖ್ಯ ಸಚೇತಕ ವಿ.ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗೇರುಬೀಜ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಕರಾವಳಿ ಪ್ರಾಧಿಕಾರ ದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕಾ ಸ್ಥಾಯೀ ಸಮಿತಿ ಅಧ್ಯಕ್ಷ ಸುಮೀತ್ ಶೆಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷೆ ಸೌಭಾಗ್ಯ ಮಡಿವಾಳ, ಉಪಾಧ್ಯಕ್ಷ ಹರೀಶ್ ನಾಯಕ್, ಹೆಬ್ರಿ ತಾಲೂಕು ಪಂಚಾಯತ್ ಅಧ್ಯಕ್ಷ ರಮೇಶ್ ಪೂಜಾರಿ, ಪುರಸಭಾ ಅಧ್ಯಕ್ಷೆ ಸುಮಾ, ಉಪಾಧ್ಯಕ್ಷೆ ಪಲ್ಲವಿ ರಾವ್, ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಉದಯ ಎಸ್.ಕೋಟ್ಯಾನ್, ರವಿಪ್ರಕಾಶ್ ಪ್ರಭು, ರೇಷ್ಮಾ ಶೆಟ್ಟಿ, ಜ್ಯೋತಿ ಪೂಜಾರಿ, ಭಾರತೀಯ ಕಿಸಾನ್ ಸಂಘದ ಉಪಾಧ್ಯಕ್ಷ ಉಮಾಕಾಂತ ರಾನಡೆ, ಕಾರ್ಕಳ ಎಪಿಎಂಸಿ ಅಧ್ಯಕ್ಷ ಮೋಹನ್ ದಾಸ್ ಶೆಟ್ಟಿ, ಕಾರ್ಕಳ ತೋಟಗಾರಿಕೆ ರೈತ ಉತ್ಪಾದಕ ಕಂಪೆನಿಯ ಅಧ್ಯಕ್ಷ ಅಂತೋನಿ ಡಿಸೋಜಾ ನಕ್ರೆ, ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ. ಎಮ್.ಕೆ. ನಾಯ್ಕ್, ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಡಾ. ನವೀನ್ ಭಟ್, ಉಡುಪಿ ತೋಟಗಾರಿಕೆ ಉಪನಿರ್ದೇಶಕಿ ಭುವನೇಶ್ವರಿ ಉಪಸ್ಥಿತರಿದ್ದರು.

Comments are closed.