ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ನಾನಾ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ 2019-20ನೇ ಸಿಇಟಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಫಲಿತಾಂಶ ಪ್ರಕಟಿಸಿದ್ದಾರೆ.
ಇಂಜಿನಿಯರಿಂಗ್ ವಿಭಾಗದಲ್ಲಿ ಮಾರತ್ ಹಳ್ಳಿಯ ಚೈತನ್ಯ ಟೆನ್ನೋ ಸ್ಕೂಲ್ನ ಜಫಿನ್ ಬಿಜು ಮೊದಲ ಸ್ಥಾನ ಗಳಿಸಿದ್ದಾರೆ. ಎರಡನೇ ಸ್ಥಾನ ಮಂಗಳೂರು ಎಕ್ಸ್ ಪರ್ಟ್ ಕಾಲೇಜಿನ ಚಿನ್ಮಯ್ ಪಾಲಾಗಿದೆ. ಮೂರನೇ ಸ್ಥಾನ ಚೈತನ್ಯ ಕಾಲೇಜಿನ ಸಕೇತಿಕಾಗೆ ಲಭಿಸಿದೆ.
ಇನ್ನು ಮೊದಲ 10 ಸ್ಥಾನಗಳಲ್ಲಿ 7 ಸ್ಥಾನಗಳನ್ನು ಬೆಂಗಳೂರು ಪಾಲಾಗಿದ್ದು, 2 ಸ್ಥಾನ ಮಂಗಳೂರು ಹಾಗೂ 1 ಸ್ಥಾನವನ್ನು ಬಳ್ಳಾರಿ ಪಡೆದುಕೊಂಡಿದೆ.
ಈಗಾಘಲೇ ಆನ್ಲೈನ್ನಲ್ಲಿ ಫಲಿತಾಂಶ ಪ್ರಕಟವಾಗಿದ್ದು, ಇಂದು ಮಧ್ಯಾಹ್ನ 1 ಗಂಟೆಯ ವೇಳೆಗೆ ಎಲ್ಲಾ ಕಾಲೇಜುಗಳಲ್ಲಿಯೂ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡರು ತಿಳಿಸಿದ್ದಾರೆ.
ಈ ವೆಬ್ಸೈಟ್ಗಳಲ್ಲಿ ನಿಮ್ಮ ಫಲಿತಾಂಶ ತಿಳಿದುಕೊಳ್ಳಿ
Comments are closed.