ಕರಾವಳಿ

ವಿವೇಕಾನಂದರು ಯುವ ಜನತೆಯ ಪ್ರತಿನಿಧಿ- ಶಾಸಕ ರಘುಪತಿ ಭಟ್

Pinterest LinkedIn Tumblr

ಉಡುಪಿ: ಸ್ವಾಮಿ ವಿವೇಕಾನಂದರು ಯುವಜನತೆಯ ಪ್ರತಿನಿಧಿ , ರಾಷ್ಟ್ರದ ಯುವ ಜನತೆ ಇಂದಿಗೂ ವಿವೇಕಾನಂದರ ಸಂದೇಶಗಳನ್ನು ತಮ್ಮ ಆದರ್ಶಗಳನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಅವರು ಭಾನುವಾರ, ಅಜ್ಜರಕಾಡು ಕ್ರೀಡಾಂಗಣದಲ್ಲಿ, ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್ ಉಡುಪಿ, ಕಾಲೇಜು ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ (ಲೀಡ್ ಕಾಲೇಜು), ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಉಡುಪಿ, ಪೂರ್ಣಪ್ರಜ್ಞ ಕಾಲೇಜು, ಉಡುಪಿ, ಮಹಾತ್ಮಗಾಂಧಿ ಮೆಮೋರಿಯಲ್ ಕಾಲೇಜು, ಉಡುಪಿ, ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ, ಮಾಧವ ಪೈ ಮೆಮೋರಿಯಲ್ ಕಾಲೇಜು, ಮಣಿಪಾಲ ಹಾಗೂ ಇನ್ನಿತರ ಇಲಾಖೆಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಮತ್ತು ಜಿಲ್ಲಾ ಯುವಸಬಲೀಕರಣ ಕೇಂದ್ರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಭಾರತವು ಹಾವಾಡಿಗರ ದೇಶ ಎಂಬ ಭಾವನೆ ಇದ್ದ ಕಾಲದಲ್ಲಿ , ಭಾರತೀಯತೆಯನ್ನು ಇಡೀ ವಿಶ್ವಕ್ಕೆ ಪರಿಚಯಿಸಿದವರು ವಿವೇಕಾನಂದರು, ವಿಶ್ವಧರ್ಮ ಸಮ್ಮೇಳನದಲ್ಲಿನ ಅವರ ಭಾಷಣ ಭಾರತೀಯರ ಮನದಲ್ಲಿ ಅಚ್ಚಳಿಯದೇ ಉಳಿದಿದೆ, ಇಂತಹ ಮಹನೀಯರ ಜಯಂತಿಗಳು ಅಗತ್ಯವಾಗಿವೆ, ಯುವ ಜನತೆ ವಿವೇಕಾನಂದರ ಆದರ್ಶಗಳನ್ನು ಪಾಲಿಸಬೇಕು ಆದರೆ ಇತ್ತೀಚೆಗೆ ಕೆಲವು ವಿಷಯಗಳಲ್ಲಿ ಯುವ ಜನತೆಯನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ ಇದಕ್ಕೆ ಪ್ರಮುಖ ಉದಾಹರಣೆ ಪೌರತ್ವ ಕಾಯಿದೆ, ಈ ಕಾಯಿದೆಯ ಅನುಷ್ಠಾನದಿಂದ ಪ್ರಸ್ತುತ ಭಾರತದಲ್ಲಿರುವ ಯಾವೋಬ್ಬ ಪ್ರಜೆಗೂ ಯಾವುದೇ ತೊಂದರೆಯಾಗುವುದಿಲ್ಲ ಆದರೂ ಸಹ ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲಾಗುತ್ತಿದೆ, ವಿದ್ಯಾರ್ಥಿಗಳ ಕಾನೂನನ್ನು ಅರಿತು ರಾಷ್ಟ್ರದ ಪರವಾಗಿ ನಿಲ್ಲಬೇಕು ಎಂದು ಶಾಸಕರು ಹೇಳಿದರು. ಕಾಲೇಜು ಶಿಕ್ಷಣ ಇಲಾಖೆಯಿಂದ ಪದವಿ ವಿದ್ಯಾರ್ಥಿಗಳಿಗೆ ನೀಡುವ ಉಚಿತ ಲ್ಯಾಪ್ ಟಾಪ್ ಗಳನ್ನು ಶಾಸಕರು ವಿತರಿಸಿದರು.

ಸ್ವಾಮೀ ವಿವೇಕಾನಂದರ ಕುರಿತು ಪ್ರಧಾನ ಭಾಷಣ ಮಾಡಿದ ಡಾ. ಎನ್.ಎಸ್.ಎ.ಎಂ. ಕಾಲೇಜು ನಿಟ್ಟೆ ಇಲ್ಲಿಯ ಭೌತಶಾಸ್ತ್ರ ಉಪನ್ಯಾಸಕಿ ಅಕ್ಷತಾ ಗೋಖಲೆ , ಆಧ್ಯಾತ್ಮಕ ಚಿಂತನೆ ಮೂಲಕ ಜಗತ್ತಿಗೆ ಭಾರತದ ಜ್ಞಾನದ ಚಿಂತನೆಯನ್ನು ಸಾರಿದ ವಿವೇಕಾನಂದರು, ಭಾರತದಲ್ಲಿ ವೈಜ್ಞಾನಿಕ ಕ್ರಾಂತಿಗೂ ಕಾರಣರಾಗಿದ್ದರು, ವಿಶ್ವಧರ್ಮ ಸಮ್ಮೇಳನಕ್ಕೆ ತೆರಳುವಾಗ ನೌಕೆಯಲ್ಲಿ ಪರಿಚಯವಾದ ಜೆಮ್ಷೆಡ್ ಟಾಟಾ ಅವರಿಗೆ ಭಾರತದಲ್ಲಿ ವೈಜ್ಞಾನಿಕ ಕ್ರಾಂತಿ ಮಾಡಲು ಅವರು ನೀಡಿದ ಪ್ರೇರಣೆಯಿಂದ ಭಾರತೀಯ ವಿಜ್ಞಾನ ಸಂಸ್ಥೆ ಆರಂಭಗೊಂಡು , ಇದರಿಂದ ಪ್ರಖ್ಯಾತ ವಿಜ್ಞಾನಿಗಳು ರೂಪುಗೊಂಡು , ದೇಶ ಇಂದು ವೈಜ್ಞಾನಿಕವಾಗಿ ಇಷ್ಟು ಮುಂದುವರೆಯಲು ಕಾರಣರಾದರು, ಅಲ್ಲದೆ ಭಾರತದ ಸ್ವಾತಂತ್ರ ಸಂಗ್ರಾಮದಲ್ಲಿ ಹೋರಾಡಿದ ಸುಭಾಷ್ ಚಂದ್ರ ಭೋಸ್,ಸಾವರ್ಕರ್ ಅವರಿಗೂ ವಿವೇಕಾನಂದ ಆದರ್ಶವಾಗಿದ್ದರು, ವಿವೇಕಾನಂದರು ಭಾರತದ ಯುವ ಜನತೆಗೆ ಶೇಷ್ಠ ಚಿಂತನೆ ಮತ್ತು ಸಂದೇಶಗಳನ್ನು ನೀಡಿದ್ದಾರೆ, ಯುವ ಜನತೆ ಇವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸಮಾಜಕ್ಕಾಗಿ ಬದುಕುವುದನ್ನು ರೂಡಿಸಿಕೊಳ್ಳಬೇಕು ಎಂದು ಹೇಳಿದರು.

ಸ್ವಾಮಿ ವಿವೇಕಾನಂದ ಜಯಂತಿ ಕುರಿತು ಜಿಲ್ಲೆಯ ಕಾಲೆಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ದೇಗಳಲ್ಲಿ ವಿಜೇತರಾದವರಿಗೆ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ ಬಹುಮಾನ ವಿತರಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು , ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್ , ಡಾ. ಜಿ. ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಉಪಸ್ಥಿತರಿದ್ದರು.ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಸ್ವಾಗತಿಸಿದರು, ಡಾ. ಜಿ. ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾದ್ಯಾಪಕ ನಿತ್ಯಾನಂದ ವಂದಿಸಿದರು. ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿದರು.

ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಅಂಗವಾಗಿ, ಬೋರ್ಡ್ ಹೈಸ್ಕೂಲ್ನಿಂದ ಅಜ್ಜರಕಾಡು ಕ್ರೀಡಾಂಗಣದವರೆಗೆ , ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಥಾ ಕಾರ್ಯಕ್ರಮ ನಡೆಯಿತು.

Comments are closed.