ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ಉಂಟಾಗಿದ್ದ ಪ್ರವಾಹದಲ್ಲಿ ಪುಸ್ತಕಗಳನ್ನು ಕಳೆದುಕೊಂಡಿದ್ದ ವಿದ್ಯಾರ್ಥಿಗಳಿಗೆ ಸಿಎಂ ಯಡಿಯೂರಪ್ಪ ಅವರು ನೆರವು ನೀಡಿದ್ದಾರೆ.
ಮಹಾಮಳೆಗೆ ಹೊಸಕೆರೆಹಳ್ಳಿ ಸುತ್ತಮುತ್ತಲೂ ಪ್ರವಾಹದ ಪರಿಸ್ಥಿತಿ ಎದುರಾಗಿತ್ತು. ಈ ವೇಳೆ ವಿದ್ಯಾರ್ಥಿಗಳು ತಮ್ಮ ನೋಟ್ ಪುಸ್ತಕಗಳು ಹಾಗೂ ಪಠ್ಯ ಪುಸ್ತಕಗಳನ್ನು ಕಳೆದುಕೊಂಡಿರುವ ಕುರಿತು ಕೆಲ ಮಾಧ್ಯಮಗಳು ವರದಿ ಪ್ರಸಾರ ಮಾಡಿತ್ತು.
ಈ ವರದಿಯನ್ನು ಗಮನಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು ಹಾಗೂ ಆರ್ಥಿಕ ಸಹಾಯ ನೀಡಿದ್ದಾರೆ. ಸಾಂಕೇತಿಕವಾಗಿ ಮೂರ್ನಾಲ್ಕು ವಿದ್ಯಾರ್ಥಿಗಳಿಗೆ ಸಿಎಂ ಪುಸ್ತಕ ವಿತರಿಸಿದ್ದು ಬಳಿಕ ಎಲ್ಲಾ ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ.
Comments are closed.