ಕರಾವಳಿ

SSLC ಫಲಿತಾಂಶ- ಕುಂದಾಪುರಕ್ಕೆ ಪ್ರಥಮ, ರಾಜ್ಯಕ್ಕೆ 5ನೇ ರ‍್ಯಾಂಕ್‌ ಪಡೆದ ಎಕ್ಸ್‌ಲೆಂಟ್ ಮತ್ತು ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಪ್ರತ್ವಿತಾ ಪಿ. ಶೆಟ್ಟಿಗೆ ಐ.ಎ.ಎಸ್ ಅಧಿಕಾರಿಯಾಗುವಾಸೆ

Pinterest LinkedIn Tumblr

ಕುಂದಾಪುರ: ಎಕ್ಸ್‌ಲೆಂಟ್ ಮತ್ತು ಲಿಟ್ಲ್ ಸ್ಟಾಾರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರತ್ವಿತಾ ಪಿ. ಶೆಟ್ಟಿ ಎಸ್.ಎಸ್.ಎಲ್.ಸಿ -2024 ಪರೀಕ್ಷೆಯಲ್ಲಿ 625ಕ್ಕೆ 621 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ 5 ನೇ ರ‍್ಯಾಂಕ್ ‌ಮತ್ತು ಕುಂದಾಪುರ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ವಿದ್ಯಾರ್ಥಿನಿಯನ್ನು ಸನ್ಮಾನಿಸಲಾಯಿತು ಮತ್ತು ಸಂಸ್ಥೆಯ ವತಿಯಿಂದ 10 ಸಾವಿರ ಪ್ರೋತ್ಸಾಹಕರ ನಗದು ಬಹುಮಾನ ನೀಡುವುದರ ಮೂಲಕ ವಿದ್ಯಾರ್ಥಿಯನ್ನು ಗೌರವಿಸಲಾಯಿತು.

ಐ.ಎ.ಎಸ್ ಅಧಿಕಾರಿಯಾಗುವ ಆಸೆ:
ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕ್ ಪಡೆದ ವಿದ್ಯಾರ್ಥಿನಿ ಪ್ರತ್ವಿತಾ ಪಿ ಶೆಟ್ಟಿ, ಮುಂದೆ ಯು.ಪಿ.ಎಸ್.ಸಿ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾಗುವ ಆಸೆಯಿದೆ ಎನ್ನುತ್ತಾ, ನಮ್ಮ ಶಾಲೆಯ ಶಿಕ್ಷಕರು ಸಂಜೆ 6 ರ ತನಕ ನಮ್ಮ ಜೊತೆ ನಿಂತು ನಿರಂತರ ತರಬೇತಿ ನೀಡಿರುವುದು ಈ ಅಂಕ ಗಳಿಸಲು ಸಹಕಾರಿಯಾಯಿತು. ನನ್ನ ಸಾಧನೆಗೆ ಬೆನ್ನೆಲುಬಾಗಿ ನಿಂತಿರುವ ಶಾಲೆಯ ಆಡಳಿತ ಮಂಡಳಿ, ಭೋದಕ, ಭೋದಕೇತರ ಸಿಬ್ಬಂಧಿ ವರ್ಗ ಮತ್ತು ಪೋಷಕರಿಗೆ ಚಿರರುಣಿಯಾಗಿದ್ದೇನೆ ಎಂದರು.

ಎಮ್.ಎಮ್.ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಎಮ್. ಮಹೇಶ ಹೆಗ್ಡೆ ಶುಭಹಾರೈಸಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯ ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು.

Comments are closed.