Uncategorized

ಕುಮಾರಸ್ವಾಮಿಯ ಮುಖ ನೋಡುವುದಕ್ಕೆ ಆಗುತ್ತಾ ಇಲ್ಲ: ದೇವೇಗೌಡ

Pinterest LinkedIn Tumblr


ಬೆಂಗಳೂರು: ಪಾಪ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿಯವರ ಮುಖ ನೋಡೊಕೆ ಆಗ್ತಾ ಇಲ್ಲ, ಜನರ ಸಮಸ್ಯೆ ಪರಿಹಾರ ಮಾಡೋಕೆ ಹೋಗ್ತಾ ಇರೋದು ಅವರು ದಾರಿ ಮಧ್ಯೆ ಹೀಗೆ ಪ್ರತಿಭಟನೆ ಮಾಡಿದರೆ ಏನು ಮಾಡ್ತಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ.

ಬಿಜೆಪಿಯವರ ಷಡ್ಯಂತ್ರ ಇದೆ

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಗ್ರಾಮ ವಾಸ್ತವ್ಯದಲ್ಲಿ ಪ್ರತಿಭಟನೆ ಮಾಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಇದೆಲ್ಲಾ ಬೇಕು ಅಂತ ಮಾಡ್ತಾ ಇದ್ದಾರೆ. ಬಿಜೆಪಿಯವರ ಷಡ್ಯಂತ್ರ ಇದೆ ಇದರಲ್ಲಿ ಗ್ರಾಮವಾಸ್ತವ್ಯದ ವಿರುದ್ಧ ನೇರವಾಗಿ ವಿರೋಧ ವ್ಯಕ್ತಪಡಿಸ್ತಾ ಇರೋದು ಬಿಜೆಪಿಯವರು. ಅವರದ್ದೇ ಷಡ್ಯಂತ್ರ ಇದೆಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಧು ಬಂಗಾರಪ್ಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಹರಿದ್ದಾರೆ

ಇದೇ ವೇಳೆ ರಾಜ್ಯಾಧ್ಯಕ್ಷರ ನೇಮಾಕ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ವಿಶ್ವನಾಥ್ ಬಿಜೆಪಿಗೆ ಹೋಗಲ್ಲ, ಅದೆಲ್ಲಾ ಸುಳ್ಳು, ಅವರೇ ಕ್ಲಿಯರ್ ಕಟ್ ಆಗಿ ಹೇಳಿದ್ದಾರೆ. ಎರಡ್ಮೂರು ದಿನಗಳಲ್ಲಿ ಜೆಡಿಎಸ್ ಪಕ್ಷಕ್ಕೆ ನೂತನ ರಾಜ್ಯಾಧ್ಯಕ್ಷ ನೇಮಾಕ ಮಾಡುತ್ತೇವೆ. ನಮ್ಮ ಪಕ್ಷದಲ್ಲಿ ಆರು ಜನ ಪರಿಶಿಷ್ಟರು ಗೆದ್ದಿದ್ದಾರೆ. ದೇವೇಗೌಡರು ಅವರಿಗೇನೂ ಮಾಡಿಲ್ಲ ಅನ್ನೋ ಅಸಮಧಾನ ಇದೆ. ಅವರಲ್ಲಿರುವ ಅಸಮಧಾನ ನನಗೆ ಗೊತ್ತಾಗುತ್ತೆ, ಪರಿಶಿಷ್ಟರಿಗೇ ರಾಜ್ಯಾಧ್ಯಕ್ಷ ಸ್ಥಾನ ನೀಡಲು ಚಿಂತಿಸಿದ್ದೇನೆ ಮಧು ಬಂಗಾರಪ್ಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಹರಿದ್ದಾರೆ. ಪಕ್ಷದ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿ ಇದೆ. ಎಲ್ಲರನ್ನೂ ಕರೆದು ಸಭೆ ಮಾಡಿ ತೀರ್ಮಾನ ಮಾಡ್ತೀನಿ , ಆರು ಜನರಲ್ಲಿ ಒಬ್ಬರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಬಗ್ಗೆ ಇದೇ ವೇಳೆ ದೇವೇಗೌಡರು ಸುಳಿವು ನೀಡಿದರು.

Comments are closed.