Uncategorized

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿ ಪ್ರತಿಭಟನೆ ಹಿನ್ನೆಲೆ: ಭಾರತದ ಪ್ರವಾಸ ರದ್ದುಗೊಳಿಸಿದ ಜಪಾನ್​ ಪ್ರಧಾನಿ

Pinterest LinkedIn Tumblr

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆ ಜಪಾನ್​ ಪ್ರಧಾನಿ ಭಾರತದ ಪ್ರವಾಸ ರದ್ದುಗೊಳಿಸಿದ್ದಾರೆ.

ಜಪಾನ್​ ಪ್ರಧಾನಿ ಶಿಂಜೋ ಅಬೆ ಹಾಗೂ ಪ್ರಧಾನಿ ನರೇಂದ್ರ ಮೋದಿ ನಡುವೆ ಈ ಭಾನುವಾರ ಸಭೆ ನಿರ್ಧಾರವಾಗಿತ್ತು. ಈ ಸಭೆ ಅಸ್ಸಾಂನ ಗೌವಹತಿಯಲ್ಲಿ ಆಯೋಜಿಸಲಾಗಿತ್ತು. ಆದರೆ, ಈಶಾನ್ಯ ರಾಜ್ಯದಲ್ಲಿ ಪ್ರತಿಭಟನೆ ಉಲ್ಭಣಗೊಂಡ ಹಿನ್ನೆಲೆ ಈ ಪ್ರವಾಸವನ್ನು ರದ್ದು ಗೊಳಿಸಲಾಗಿದೆ ಎಂದು ರಾಯಿಟರ್​ ವರದಿ ಮಾಡಿದೆ.

ಇನ್ನು ಗುರುವಾರ ಬಾಂಗ್ಲಾದೇಶ ವಿದೇಶಾಂಗ ಸಚಿವ ಎಕೆ ಅಬ್ದುಲ್​ ಮೊಮೆನ್​ ಮತ್ತು ಗೃಹ ಸಚಿವರ ನಡುವೆ ಮೇಘಾಲಯದಲ್ಲಿ ಭೇಟಿ ನಿಗದಿಯಾಗಿತ್ತು. ಇದು ಕೂಡ ರದ್ದು ಗೊಂಡಿದೆ.

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಕಳೆದೆರಡು ದಿನಗಳಿಂದ ಈಶಾನ್ಯ ರಾಜ್ಯದಲ್ಲಿ ಪ್ರತಿಭಟನೆ ಕಾವು ಹೆಚ್ಚಾಗಿದೆ. ಅಲ್ಲದೇ ಜಪಾನ್​ ಪ್ರಧಾನಿಗೆ ಸ್ವಾಗತ ಕೋರಿ ಗುವಾಹತಿಯಲ್ಲಿ ಹಾಕಿದ್ದ ಬ್ಯಾನರ್​ನ್ನು ಕಿತ್ತು ಹಾಕಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಡೆಯ ಕ್ಷಣದವರೆಗೂ ಈ ಭೇಟಿ ಬಗ್ಗೆ ಎರಡು ದೇಶದ ಸರ್ಕಾರಗಳು ಪ್ರಯತ್ನಿಸಿದವು. ಆದರೆ, ಪರಿಸ್ಥಿತಿ ಉತ್ತಮವಾಗಿಲ್ಲದ ಕಾರಣ ಇದನ್ನು ಕೈಬಿಡಲಾಗಿದೆ.

ಇನ್ನು ಈ ಕುರಿತು ಮಾತನಾಡಿರುವ ವಿದೇಶಾಂಗ ಸಚಿವರ ವಕ್ತಾರ ರವೀಶ್​ ಕುಮಾರ್​, ಈ ಭೇಟಿ ಕುರಿತು ಯಾವುದೇ ಮಾಹಿತಿ ಹಂಚಿಕೊಳ್ಳಲು ಇಲ್ಲ ಎಂದಿದ್ದಾರೆ.

Comments are closed.